ಕೃಷ್ಣಾ ನದಿ
★ದಕ್ಷಿಣ ಭಾರತದ ಎರಡನೆಯ ದೊಡ್ಡ ನದಿ ಯಾಗಿದೆ.
★ ಈ ನದಿ ಮಹಾರಾಷ್ಟ್ರದ ಪಶ್ಚಿಮ ಘಟ್ಟದ ಮಹಾದೇವ ಪರ್ವತ ಶ್ರೇಣಿ ಯಲ್ಲಿ ಮಹಾಬಲೇಶ್ವರದ ಹತ್ತಿರ ಹುಟ್ಟುತ್ತದೆ.
★ ಸಮುದ್ರ ಮಟ್ಟಕ್ಕಿಂತ ೧೩೩೮ ಮೀಟರ ಎತ್ತರದಲ್ಲಿ ಉಗಮವಾಗಿ ಸುಮಾರು ೧೩೯೨ ಕಿ.ಮಿ.ಗಳಷ್ಟು ಹರಿದು ಆಂಧ್ರಪ್ರದೇಶದ ಹಂಸಲಾದೀವಿ ಯಲ್ಲಿ ಬಂಗಾಳ ಕೊಲ್ಲಿ ಯನ್ನು ಸೇರುತ್ತದೆ.
★ ಕೃಷ್ಣಾ ನದಿ ಮಹಾರಾಷ್ಟ್ರ,ಕರ್ನಾಟಕ, ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಹರಿಯುತ್ತದೆ.
★ ಕರ್ನಾಟಕ ರಾಜ್ಯದಲ್ಲಿ ಇದು ಸುಮಾರು ೪೮೩ ಕಿ.ಮಿ. ಹರಿಯುತ್ತದೆ.
★ ಇದರ ಮುಖ್ಯವಾದ ಉಪನದಿಗಳೆಂದರೆ ತುಂಗಭದ್ರಾ , ಕೊಯ್ನಾ, ಭೀಮಾ , ಮಲಪ್ರಭಾ ,ಮತ್ತು ಘಟಪ್ರಭಾ.
★ ಮಹಾರಾಷ್ಟ್ರ ದಲ್ಲಿ ಕೊಯ್ನಾದ ಹತ್ತಿರ, ಕರ್ನಾಟಕದಲ್ಲಿ ಆಲಮಟ್ಟಿ ಮತ್ತು ನಾರಾಯಣಪುರ ಗಳಲ್ಲಿ ಹಾಗೂ ಆಂಧ್ರ ಪ್ರದೇಶ ದಲ್ಲಿ ಶ್ರೀಶೈಲಂ ಮತ್ತು ನಾಗಾರ್ಜುನಸಾಗರ ದಲ್ಲಿ ಆಣೆಕಟ್ಟುಗಳನ್ನು ಕಟ್ಟಲಾಗಿದೆ.
🍀 ಶಿಲಾನ್ಯಾಸ 🍀
★ ೧೯೬೨ ರಲ್ಲಿ ಭಾರತ ದ ಪ್ರಧಾನ ಮಂತ್ರಿ ಯಾದ ಶ್ರೀ ಲಾಲ ಬಹಾದ್ದೂರ ಶಾಸ್ತ್ರಿ ಯವರು ಕೃಷ್ಣಾ ಮೇಲ್ದಂಡೆ ಯೋಜನೆ ಗೆ ಅಡಿಗಲ್ಲನ್ನಿಟ್ಟರು.
★ ಈ ಯೋಜನೆಯಲ್ಲಿ ಆಲಮಟ್ಟಿ ಜಲಾಶಯ. ಹಾಗೂ ಕೃಷ್ಣಾ ಮಲಪ್ರಭಾ ಗಳ ಸಂಗಮದ ಕೆಳಭಾಗದಲ್ಲಿ ನಾರಾಯಣಪುರ ಜಲಾಶಯ ಗಳಿವೆ.
★ ೧೯೯೪ ರಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ ದ ರಚನೆಯಾಯಿತು.
ಕಾಮೆಂಟ್ ಪೋಸ್ಟ್ ಮಾಡಿ